
ಇಂದು ರಾಜ್ಯದಲ್ಲಿ ವರುಣ ಆರ್ಭಟ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿ ಮುನ್ಸೂಚನೆ ನೀಡಿದೆ.
ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ ಕಿರಿಕಟ್ಟೆಗಳು ತುಂಬಿ ಹರಿಯುತ್ತಿದೆ ಕೆಲವು ಭಾಗದಲ್ಲಿ ಭಾರಿ ಮಳೆಗೆ ಜನಜೀವನ ಕೂಡ ಅಸ್ತವ್ಯಸ್ತಗೊಂಡಿತ್ತು, ರಾಜ್ಯದ 11 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ .
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದ್ದು, ನಗರದಾದ್ಯಂತ ಮೋಡ ಕವಿದ ವಾತಾವರಣವು ಮುಂದುವರೆಯಲಿದೆ. ತಾಪಮಾನ 21 ಡಿಗ್ರಿಗೆ ಇಳಿಯಲಿದ್ದು ಸಾಧಾರಾಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಗಳಿವೆ .
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಬೆಂಗಳೂರು ಹವಾಮಾನ ಕೇಂದ್ರದ IMD’ ಮುಖ್ಯಸ್ಥರಾದ ಡಾ.ಎನ್.ಪುವಿಯರಸನ್ ಮಾಹಿತಿ ಹಂಚಿಕೊಂಡಿದ್ದಾರೆ.