
ನಮ್ಮ ರಾಜ್ಯದ ನಾಯಕ ನಮಗೆ ಹೆಮ್ಮೆ, ಆದರೆ ಸಿಎಂ ನಿತೀಶ್ ಕುಮಾರ್ ಅವರು ದೆಹಲಿಗೆ ಹೋಗಿ ನರೇಂದ್ರ ಮೋದಿ ಕಾಲಿಗೆ ಬಿದ್ದಿರುವುದು ಬಿಹಾರಕ್ಕೆ ಮಾಡಿದ ಅವಮಾನವಾಗಿದೆ ಎಂದು ಚುನಾವಣಾ ವಿಶ್ಲೇಷಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ…!
“ಜನ್ ಸೂರಜ್” ಅಭಿಯಾನದ ಭಾಗವಾಗಿ ಭಾಗಲ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಿಶೋರ್, 2025ರ ವಿಧಾನಸಭಾ ಚುನಾವಣೆಯ ನಂತರವೂ ಬಿಜೆಪಿಯ ಬೆಂಬಲದೊಂದಿಗೆ ತಾನು ಅಧಿಕಾರದಲ್ಲಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ನಿತೀಶ್ ಕುಮಾರ್, ಮೋದಿ ಅವರ ಕಾಲಿಗೆರಗಿದ್ದಾರೆ’ ಎಂದು ಕಿಡಿಕಾರಿದ್ದಾರೆ…!!
ಈ ಹಿಂದೆ ನಿತೀಶ್ ಕುಮಾರ್ ಅವರೊಂದಿಗೆ ಕೆಲಸ ಮಾಡಿದ ನಾನು ಈಗ ಏಕೆ ಅವರನ್ನು ಟೀಕಿಸುತ್ತಿದ್ದೇನೆ ಎಂದು ಜನ ನನ್ನನ್ನು ಕೇಳುತ್ತಾರೆ, ಆಗ ನಿತಿಶ್ ಕುಮಾರ್ ವಿಭಿನ್ನ ವ್ಯಕ್ತಿಯಾಗಿದ್ದರು, ಅವರ ಆತ್ಮಸಾಕ್ಷಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ’ ಎಂದರು…!