
ಲಖ್ನೋ – ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್ ವಿಭಜನೆಯಾಗಿದ್ದೇ ಪ್ರಮುಖ ಕಾರಣವಾಯಿತು, ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಅನುಭವಿಸಲು ಕಾರಣವಾಯಿತು ಎಂದು ಆರ್ಎಸ್ಎಸ್ ವಿಶ್ಲೇಷಣೆ ಮಾಡಿದೆ…!
RSS ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಬಿಜೆಪಿಯ ಚುನಾವಣಾ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮೂರು ದಿನಗಳ ಕಾಲ ನಡೆಸಿದ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ…!!
ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ನಿರುದ್ಯೋಗ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಯುವಕರಲ್ಲಿ ಹೆಚ್ಚುತ್ತಿರುವ ಕೋಪವೇ ಬಿಜೆಪಿ ಹಿನ್ನಡೆಗೆ ಮತ್ತೊಂದು ಕಾರಣ ಎಂದು ಆರ್ಎಸ್ಎಸ್ ತಿಳಿಸಿದೆ…!
80 ಲೋಕಸಭಾ ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ 37, ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 33 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಶಕ್ತವಾಯಿತು…!!
ಆದ್ದರಿಂದ ಸಂಘವು ಈಗ ಉದ್ಯೋಗ ಹೆಚ್ಚಿಸುವಂತಹ ವಿಷಯಗಳಲ್ಲಿ ಕೆಲಸ ಮಾಡಲು ನಿರ್ಧರಿಸಿದೆ…!
ಇದು ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ತಲುಪುವಂತೆ ಕಾರ್ಯ ನಿರ್ವಹಿಸಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ…!!
ಈ ನಿಟ್ಟಿನಲ್ಲೇ ಉತ್ತರಪ್ರದೇಶದ ಪ್ರಮುಖ ಪ್ರದೇಶಗಳಲ್ಲಿನ ತನ್ನ ಪ್ರಚಾರಕರನ್ನು ಸ್ಥಳಾಂತರ ಮಾಡಿ ಮರು ಸಂಘಟನೆಗೆ ಕಾರ್ಯತಂತ್ರ ರೂಪಿಸಿದೆ…!
ಇದರಿಂದ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಹಿಡಿತ ಸಾಧಿಸಬಹುದು…!!