
ಲೋಕಸಭಾ ಚುನಾವಣೆಯಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿಯ ಕಳಪೆ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ದೂಷಿಸುವುದು ಸರಿಯಲ್ಲ ಎಂದು ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಅಭಿಪ್ರಾಯಪಟ್ಟಿದ್ದಾರೆ…!
1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ಬಳಿಕವೂ ಪಕ್ಷದ ಸಾಧನೆ ರಾಜ್ಯದಲ್ಲಿ ಕಳಪೆಯಾಗಿತ್ತು…!!
ಸೋತರೂ ರಾಮಮಂದಿರ ನಿರ್ಮಾಣದ ಸಂಕಲ್ಪದಿಂದ ನಾವು ಹಿಂದೆ ಸರಿಯಲಿಲ್ಲ, ಎಂದೆಂದಿಗೂ ಅಯೋಧ್ಯೆಯನ್ನು ಮತಗಳೊಂದಿಗೆ ಸಂಯೋಜಿಸಿಲ್ಲ, ಇದೀಗ ಮಥುರಾ – ಕಾಶಿಯಲ್ಲಿನ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ವಿವಾದಗಳನ್ನು ಸಹ ನಾವು ಮತಗಳೊಂದಿಗೆ ಸಂಯೋಜಿಸುತ್ತಿಲ್ಲ ಎಂದು ಉಮಾ ಭಾರತಿ ಹೇಳಿದರು…!
ಉತ್ತರ ಪ್ರದೇಶದ ಫಲಿತಾಂಶವನ್ನು ಭಗವಾನ್ ರಾಮನ ಮೇಲೆ ಜನರ ಭಕ್ತಿ ಕಡಿಮೆಯಾಗಿದೆ ಎಂದು ಅರ್ಥೈಸಿಕೊಳ್ಳುವುದು ಸರಿಯಲ್ಲ…!
ಪ್ರತಿಯೊಬ್ಬ ರಾಮಭಕ್ತನೂ ಬಿಜೆಪಿಗೆ ಮತ ಹಾಕುತ್ತಾನೆ ಎಂಬ ದುರಂಹಂಕಾರ ನಮಗೆ ಇರಬಾರದು ಎಂದ ಅವರು ನಮಗೆ ಮತ ನೀಡದವರು ರಾಮ ಭಕ್ತರಲ್ಲ ಎಂದು ಭಾವಿಸಬಾರದು ಎಂದರು…!!