
ಬೆಳಗಾವಿ : ಕಳೆದ ಕೆಲವು ತಿಂಗಳಿನ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಬಾರಿ ಸದ್ದು ಮಾಡಿತ್ತು. ಇರಲ್ಲದೆ ಇತ್ತೀಚಿಗೆ ಲೋಕಸಭೆ ಚುನಾವಣೆಯ ಫಲಿತಾಂಶ ಬಂದ ಬಳಿಕ ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ ಗೆಲ್ಲುತ್ತಿದ್ದಂತೆ ಪಾಕ್ ಘೋಷಣೆ ಕೂಗಲಾಗಿತ್ತು.
ಬೆಳಗಾವಿ ಜಿಲ್ಲಾ ಕೋರ್ಟ್ ನಲ್ಲಿ ಮತ್ತೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಬೆಳಗಾವಿ ಜಿಲ್ಲಾ ಕೋರ್ಟ್ ನಲ್ಲಿ ಪಾಕಿಸ್ತಾನ ಪರ ಘೋಷಣೆ ಹೋಗಿದ್ದಾನೆ. ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಂತೆ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಆರೋಪಿ ಜಯೇಶ್ ಪೂಜಾರಿಗೆಧರ್ಮದೇಟು ನೀಡಿದ್ದಾರೆ.ಕೂಡಲೆ ಆರೋಪಿ ಜಯೇಶ್ ನನ್ನು ರಕ್ಷಿಸಿ ಪೊಲೀಸರು ಆತನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಕೈದಿಯನ್ನು ಬಳಿಕ ಪೊಲೀಸರು ಸ್ಥಳೀಯ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಜಯೇಶ್ ಪೂಜಾರಿ ಈ ಹಿಂದೆ ಜೈಲಿನಲ್ಲಿ ಇದ್ದುಕೊಂಡೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಕರೆ ಹಾಕಿದ್ದ.’ತಾನು ದಾವೂದ್ ಇಬ್ರಾಹಿಂ ತಂಡದಲ್ಲಿದ್ದೇನೆ’ ಎಂದೂ ಹೇಳಿಕೊಂಡಿದ್ದ.
ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೈಲಿನಿಂದ ಜೀವ ಬೆದರಿಕೆ ಒಡ್ಡಿದ ಪ್ರಕರಣ ಸಂಬಂಧಿಸಿ ಪೊಲೀಸರು ಆತನನ್ನು ವಿಚಾರಣೆಗೆ ಕರೆತಂದಿದ್ದರು.
ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಅಲೋಕ್ ಕುಮಾರ್ ಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.