
ಹೈದರಾಬಾದ್ – ಮುತ್ತಿನ ನಗರಿಯ ಹಳೆ ಹೈದ್ರಾಬಾದ್ ವ್ಯಾಪ್ತಿಯ ಪ್ರದೇಶದಲ್ಲಿ ವಿದ್ಯುತ್ ವಿತರಣೆ ಮತ್ತು ವಿದ್ಯುತ್ ಬಿಲ್ ವಸೂಲಿ ಹೊಣೆಯನ್ನು ಗೌತಮ್ ಅದಾನಿ ಒಡೆತನದ ಅದಾನಿ ಸಮೂಹಕ್ಕೆ ನೀಡಲು ತೆಲಂಗಾಣದ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ…!
ಅದಾನಿ ಮತ್ತು ಮೋದಿ ಮಿತ್ರರು, ಅವರಿಗೆ ಲಾಭ ಮಾಡಿಕೊಡುವಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಯೋಜನೆ ರೂಪಿಸುತ್ತಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಸತತ ಆರೋಪ ಹಾಗೂ ಟೀಕೆಯ ನಡುವೆಯೇ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ…!!
ಹಳೆ ಹೈದ್ರಾಬಾದ್ ಭಾಗದಲ್ಲಿ ವಿದ್ಯುತ್ ಬಿಲ್ ಸರಿಯಾಗಿ ಪಾವತಿಯಾಗುತ್ತಿಲ್ಲ, ವಸೂಲಿಗೆ ಹೋದ ಸಿಬ್ಬಂದಿ ಮೇಲೆ ಹಲ್ಲೆಯಂತಹ ಘಟನೆಗಳು ನಡೆಯುತ್ತಿದೆ…!
ಹೀಗಾಗಿ ಬಿಲ್ ವಸೂಲಿ ಹೊಣೆಯನ್ನು ಆದಾನಿ ಕಂಪನಿಗೆ ನೀಡಲಾಗಿದೆ…!!
ಈ ಕುರಿತು ಉಭಯ ಬಣಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ…!
ಅದರನ್ವಯ ಬಾಕಿ ವಿದ್ಯುತ್ ಬಿಲ್ನಲ್ಲಿ ಶೇಕಡಾ 75ರಷ್ಟು ಸರ್ಕಾರಕ್ಕೆ ಸೇರಿದರೆ ಶೇಕಡಾ 25ರಷ್ಟು ಆದಾನಿ ಸಮೂಹಕ್ಕೆ ಹೋಗಲಿದೆ, ಇದು ಪ್ರಾಯೋಗಿಕ ಯೋಜನೆಯಾಗಿದ್ದು ಮುಂದೆ ಇಡೀ ನಗರದ ಹೊಣೆಯನ್ನು ಆದಾನಿ ಸಮೂಹಕ್ಕೆ ನೀಡಲಾಗುವುದು ಎಂದು ಸಿಎಂ ರೇವಂತ್ ರೆಡ್ಡಿ ಪ್ರಕಟಿಸಿದ್ದಾರೆ…!!
ಈ ನಡುವೆ ಸರ್ಕಾರದ ಕ್ರಮವನ್ನು ಬಿಆರ್ಎಸ್ ನಾಯಕರು ಕಟುವಾಗಿ ಟೀಕಿಸಿದ್ದಾರೆ…!
ಇದು ಹಗಲು ದರೋಡೆ, ಸಂಗ್ರಹವಾದ ಮೊತ್ತದಲ್ಲಿ ಶೇಕಡಾ 25 ಅದಾನಿ ಬೊಕ್ಕಸಕ್ಕೆ ಹೋಗಲಿದೆ ಎಂದು ವ್ಯಂಗ್ಯವಾಡಿದ್ದಾರೆ…!!