
ಹಾಸನ : ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಸಚಿವ ಹೆಚ್ಡಿ ರೇವಣ್ಣದೇವಸ್ಥಾನದಲ್ಲಿ ಕಾಲುಜಾರಿ ಬಿದ್ದು ಪಕ್ಕೆಲುಬಿಗೆ ಪೆಟ್ಟು ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.
ಎಚ್. ಡಿ. ರೇವಣ್ಣ ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದರು. ಬುಧವಾರ ಅವರು ಹೊಳೆನರಸೀಪುರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಬೇಕಿತ್ತು. ರೇವಣ್ಣ ಅಪಾರ ದೈವ ಭಕ್ತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ.
ಆದ್ದರಿಂದ ಆಷಾಢ ಮಾಸದಲ್ಲಿ ರೇವಣ್ಣ ವಿಶೇಷ ಪೂಜೆ ಸಲ್ಲಿಕೆ ಮಾಡಲು ಬುಧವಾರ ದೇವಾಲಯಕ್ಕೆ ಭೇಟಿ ನೀಡಿದ್ದರು. ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಈ ಹಿನ್ನಲೆಯಲ್ಲಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದರು.
ಇರುವ ಕಾರಣದಿಂದ ಇನ್ನು ಹೆಚ್ಚಿನ ಚಿಕಿತ್ಸೆ ಪಡೆಯಲು ಹೊಳೆನರಸೀಪುರ ದಿಂದ ಬೆಂಗಳೂರು ಕಡೆ ತಮ್ಮ ಕಾರಿನಲ್ಲೆಆಸ್ಪತ್ರೆಯಿಂದ ಹೊರಟಿದ್ದು ಪರಿಸ್ಥಿತಿ ನೆನೆದು ಕಾರಿನಲ್ಲಿ ಭಾವುಕರಾಗಿ ಕುಳಿತರು. ತನ್ನ ಕಾರಿನಲ್ಲಿ ಕುಳಿತು ಕುಟುಂಬದ ಸಂಕಷ್ಟ ನೆನೆದು ಭಾವುಕರಾದರು. ರೇವಣ್ಣಗೆ ಅಭಿಮಾನಿಗಳು ಧೈರ್ಯ ತುಂಬಿದರು.
ಕುಟುಂಬಕ್ಕೆ ಎದುರಾಗಿರುವ ಸಂಕಷ್ಟಗಳನ್ನು ದೂರ ಮಾಡಲು ಸಾಲು ಸಾಲು ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ. ರೇವಣ್ಣ ಅವರು ತಮ್ಮ ಕುಟುಂಬಕ್ಕೆ ಎದುರಾದ ಕಾನೂನು ಸಂಕಷ್ಟಗಳಿಂದ ಪಾರು ಮಾಡು ಅಂತ ಪ್ರಾರ್ಥಿಸಿದ್ದರು.
ಇನ್ನು ಹೆಚ್.ಡಿ.ರೇವಣ್ಣ ಕಿಡ್ನ್ಯಾಪ್ ಕೇಸ್ ಎದುರಿಸುತ್ತಿದ್ದಾರೆ. ಅತ್ಯಾಚಾರ ಸಂತ್ರಸ್ತೆಯನ್ನ ಕಿಡ್ನ್ಯಾಪ್ ಮಾಡಿದ್ದಾರೆ ಅಂತ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರೇವಣ್ಣ, ಸದ್ಯ ಬೇಲ್ ಮೇಲೆ ಹೊರಗಿದ್ದಾರೆ. ಆದರೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತನಿಖೆ ಮುಗಿಸಿ, ಚಾರ್ಜ್ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದೆ.
10 ದಿನ ಜೈಲು ಅನುಭವಿಸಿ ಹೆಚ್ಡಿ ರೇವಣ್ಣ ಈಗ ಹೊರ ಬಂದಿದ್ದಾರೆ. 3 ದಿನ ಪೊಲೀಸ್ ಕಸ್ಟಡಿ ಮತ್ತು 6 ದಿನ ಜೈಲುಶಿಕ್ಷೆ ಅನುಭವಿಸಿದ್ದರು. ಪತ್ನಿ ಭವಾನಿ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಭವಾನಿ ರೇವಣ್ಣ ಸೂಚನೆ ಮೇರೆಗೆ ಕಾರು ಚಾಲಕ ಅಜಿತ್, ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪವಿತ್ತು.
ಕಿಡ್ನ್ಯಾಪ್ ಬಗ್ಗೆ K.R.ನಗರ ಠಾಣೆಯಲ್ಲಿ ದೂರು ಸಂತ್ರಸ್ತೆ ಮಗ ದೂರು ನೀಡಿದ್ದರು. ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಹೈಕೋರ್ಟ್ ಮೆಟ್ಟಿಲೇರಿದ್ದ ಭವಾನಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ, ಕೆ.ಆರ್.ನಗರ ಮತ್ತು ಹಾಸನಕ್ಕೆ ಹೋಗುವಂತಿಲ್ಲ ಅಂತಾ ಷರತ್ತು ವಿಧಿಸಿ ಭವಾನಿಗೆ ರೇವಣ್ಣ ಅವರಿಗೆ ಬೇಲ್ ನೀಡಲಾಗಿತ್ತು.