
ನವದೆಹಲಿ : ಲೋಕಸಭೆ ಚುನಾವಣೆ 6 ಹಂತ ಮುಗಿದು 7ನೇ ಹಂತಕ್ಕೆ ಬಂದಿದ್ದರೂ ಈ ರಾಜಕೀಯ ನಾಯಕರ ವಿವಾದಾತ್ಮಕ ಹೇಳಿಕೆಗಳನ್ನು. ಮಣಿಶಂಕರ್ ಅಯ್ಯರ್ ರಂತಹ ಹಿರಿಯ ನಾಯಕರ ಕೆಲವು ವಿವಾದಾತ್ಮಕ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿರುವ ಕಾಂಗ್ರೆಸ್ಗೆ ಇದೀಗ ಪ್ರಿಯಾಂಕಾ ಗಾಂಧಿ ಪತಿ ಉದ್ಯಮಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಪಕ್ಷವನ್ನು ಮತ್ತಷ್ಟು ಮುಜುಗರಕ್ಕೀಡು ಮಾಡಿದೆ.
ರಾಬರ್ಟ್ ವಾದ್ರಾ ಇಂಡಿಯಾ ಟಿವಿಗೆ ನೀಡಿದ ಸಂದರ್ಶವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧವೇ ಹೇಳಿಕೆ ನೀಡಿದ್ದಾರೆ. ಇದೀಗ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ದೆಹಲಿಯಲ್ಲಿ ಆಪ್ ಮತ್ತು ಕಾಂಗ್ರೆಸ್ ಜೊತೆಯಾಗಿ ಚುನಾವಣೆ ಎದುರಿಸುತ್ತಿರುವ ಬಗ್ಗೆ ಸಂದರ್ಶನಕಾರರ ಪ್ರಶ್ನೆಗೆ ಉತ್ತರಿಸಿದ ವಾದ್ರಾ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಒಬ್ಬ ದೊಡ್ಡ ಅವಕಾಶವಾದಿ ಎಂದು ಕರೆದಿದ್ದಾರೆ. ಅಷ್ಟೇ ಅಲ್ಲದೇ ಪಕ್ಷದ ಮುಖಂಡರಾದ ಮಣಿಶಂಕರ್ ಅಯ್ಯರ್ ಬಾಯಿ ಬಡುಕ ಹಾಗೂ ದಿಗ್ವಿಜಯ್ ಸಿಂಗ್ ಅನನುಭವಿ ಎಂದು ಹೇಳಿದ್ದಾರೆ.
ಇತ್ತೀಚಿಗೆ ಭಾರತೀಯರಬಣ್ಣದ ಕುರಿತು ಮಾತನಾಡುವ ಮೂಲಕ ಭಾರಿ ವಿವಾದಕ್ಕೆ ಕಾರಣವಾಗಿದ್ದ.ಸಾಗರೋತ್ತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದು ನಿವೃತ್ತಿ ಬಳಿಕ ಎಲ್ಲಾ ವಿಚಾರಗಳಿಂದಲೂ ಎಲ್ಲದರಿಂದಲೂ ನಿವೃತರಾಬೇಕು ಎಂದರು.
ರಾಜಕೀಯ ಪ್ರವೇಶಿಸುವ ವಿಷಯವನ್ನು ಇತ್ತೀಚೆಗೆ ರಾಬರ್ಟ್ ವಾದ್ರಾ ಅವರು ವ್ಯಕ್ತಪಡಿಸಿದ್ದರು.
“ನನ್ನ ಹೆಸರಿನಿಂದ ನನ್ನ ಸ್ವಂತ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಆದರೆ ನಾನು ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಪ್ರವೇಶ ಮಾಡುವುದಿಲ್ಲ ಹಾಗೂ ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ” ಎಂದಿದ್ದರು. ಎಎನ್ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
ರಾಜಕೀಯದಲ್ಲಿ ಕೆಲವೊಂದಿಷ್ಟು ಬದಲಾವಣೆಯಾಗಬೇಕಿದೆ. ನಾನು ರೈತರ, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.
ಹೌದು ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ರಾಜಕೀಯ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದಲೇ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. , ಆದರೆ ನಾನು ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸಮಾಜ ಸೇವೆಯು ನನಗೆ ಖುಷಿ ಕೊಡುತ್ತದೆ.
ನಾನು ದೇಶ ಸೇವೆ ಮಾಡುತ್ತಿದ್ದೇನೆ. ಆದರೆ ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜಮುಖಿ ಕೆಲಸ ಹಾಗೂ ನನ್ನ ಹೆಸರು ಬಳಸಿಕೊಂಡು ರಾಜಕೀಯಕ್ಕೆ ಬರುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ಎಂದಿಗೂ ರಾಜಕೀಯ ಪ್ರವೇಶಿಸುವುದಿಲ್ಲ. ನಾನು ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನಗೆ ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಬರಬೇಕು ಎನ್ನುವ ಆಸೆ” ಎಂದು ಹೇಳಿದರು.