
ಉಡುಪಿ – ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು.ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಪ್ಯಾರಾಸಿಟಮಾಲ್ ಮಾತ್ರೆಗಳು ಮತ್ತು ಆ್ಯಂಟಿಬಯೋಟಿಕ್ ಔಷಧಿಗಳನ್ನು ಮಾರಾಟ ಮಾಡದಂತೆ ಉಡುಪಿಯ ಸಹಾಯಕ ಔಷಧ ನಿಯಂತ್ರಕರು ಉಡುಪಿ ಜಿಲ್ಲೆಯ ಮೆಡಿಕಲ್ ಶಾಪ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ…!
ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಹಾಯಕ ಔಷಧ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…!!
ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದು ಅಲ್ಲದೆ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧ ಪಡಿಸಿಟ್ಟು ಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ತಿಳಿಸಿದ್ದಾರೆ…!
ಇನ್ನು ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದೆ…!!
ಕಳೆದ 24 ಗಂಟೆಯಲ್ಲಿ 524 ಡೆಂಗ್ಯೂ ಕೇಸ್ ದಾಖಲಾಗಿವೆ…!
ಹೀಗಾಗಿ ಬೆಂಗಳೂರಿನ ಕೆಲವು ಆಸ್ಪತ್ರೆಗಳಿಲ್ಲಿ ಬೆಡ್ಗಳನ್ನ ಮೀಸಲಿಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಲಾಗಿದೆ…!!
ಬೆಂಗಳೂರಲ್ಲಿ ಒಂದೇ ದಿನಕ್ಕೆ 270 ಪ್ರಕರಣಗಳು ದಾಖಲಾಗಿವೆ…!
ಇನ್ನು ಡೆಂಗ್ಯೂ ಪ್ರಕರಣಗಳು ಒಂದು ಕಡೆ ಹೆಚ್ಚುತ್ತಿದ್ದರೆ ಜೊತೆ ಚಿಕೂನ್ ಗುನ್ಯಾ ಹಾವಳಿ ಕೂಡ ಹೆಚ್ಚಾಗಿದೆ…!!
ಒಂದುಕಡೆ ಡೆಂಗ್ಯೂ ಜನರು ಜೀವ ಹಿಂಡುತ್ತಿದ್ದರೆ, ಮತ್ತೊಂದು ಕಡೆ ಚಿಕೂನ್ ಗುನ್ಯಾ ಹಾವಳಿ ಶುರುವಾಗಿದೆ. ರಾಜ್ಯದಲ್ಲಿ 1113 ಜನರಿಗೆ ಚಿಕೂನ್ ಗುನ್ಯಾ ಭಾದಿಸಿದರೆ, ಬೆಂಗಳೂರಿನಲ್ಲಿ 176 ಪ್ರಕರಣಗಳು ದಾಖಲಾಗಿವೆ, ಒಂದು ತಿಂಗಳಲ್ಲಿ 52 ಜನರಿಗೆ ಚಿಕೂನ್ ಗುನ್ಯಾ ತಗುಲಿದೆ…!