
ಮುಂಬೈ – ಇವತ್ತು ಹಾಗೂ ನಾಳೆ ಜಗತ್ತಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರಿದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ…!
ಈ ಬಕ್ರಿದ್ ಹಬ್ಬದಂದು ಪ್ರಾಣಿಗಳನ್ನು ಬಲಿ ಕೊಡುವ ಸಂಪ್ರದಾಯವಿದೆ…!!
ಕುರುಬಾನಿ ಎಂದು ಕರೆಯಲ್ಪಡುವ ಈ ಸಂಪ್ರದಾಯವನ್ನು ಬಹುತೇಕ ಮುಸ್ಲಿಂ ಸಮುದಾಯದವರು ಶ್ರದ್ಧೆಯಿಂದ ಆಚರಿಸುತ್ತಾರೆ…!
ಆದರೆ ಮುಂಬೈನಲ್ಲಿ ಬಕ್ರಿದ್ಗೆ ಬಲಿ ಕೊಡಲು ತಂದಿದ್ದ ಮೇಕೆಯ ದೇಹದ ಮೇಲೆ ರಾಮ್ ಎಂದು ಬರೆಯುವ ಮೂಲಕ ಕೋಮು ಸೌಹಾರ್ದತೆಯನ್ನು ಹಾಳು ಮಾಡಿರುವ ಘಟನೆ ನಡೆದಿದೆ…!!
ಬಕ್ರಿದ್ಗೆ ಬಲಿ ನೀಡಲು ತಂದಿದ್ದ ಮೇಕೆಯ ಮೈ ಮೇಲೆ ರಾಮ್ ಎಂದು ಹಿಂದಿ ಭಾಷೆಯಲ್ಲಿ ಬರೆದಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಲ್ಬಣಿಸಿತ್ತು…!
ಬಿಳಿ ಬಣ್ಣದ ಮೇಕೆಯ ದೇಹದ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆಯಲಾಗಿತ್ತು…!!
ರಾಮ ಹಿಂದೂಗಳ ಆರಾಧ್ಯ ದೈವ ಆಗಿದ್ದು, ಬಲಿಕೊಡಲು ತಂದ ಮೇಕೆಯ ಮೇಲೆ ರಾಮನ ನಾಮ ನೋಡಿದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಪೊಲೀಸರಿಗೆ ದೂರನ್ನು ನೀಡಿದ್ದಾರೆ…!
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಈ ಮೇಕೆಯನ್ನು ಮಾರಾಟ ಮಾಡಿದ ಮಾಂಸದಂಗಡಿಯ ಮಾಲೀಕನ್ನು ಬಂಧಿಸಿದ್ದಾರೆ…!!
ಈ ಮಾಂಸದಂಗಡಿಯ ಮುಂದೆ ಹಿಂದೂ ಸಂಘಟನೆಗೆ ಸೇರಿದ ಅನೇಕರು ಸೇರಿದ್ದು, ಅಂಗಡಿ ಮಾಲೀಕನ ಕೃತ್ಯವನ್ನು ಪ್ರಶ್ನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ…!
ಮುಂಬೈನ ಮೀರಾ ರೋಡ್ ಬಳಿ ಈ ಘಟನೆ ನಡೆದಿದೆ…!!
ಬಕ್ರಿದ್ ಹಿನ್ನೆಲೆ ಮಾಂಸದಂಗಡಿ ಮಾಲೀಕ ಈ ಮೇಕೆಯನ್ನು ಮಾರಾಟಕ್ಕಾಗಿ ಇಟ್ಟಿದ್ದ…!
ಆದರೆ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕ್ಷಿಪ್ರವಾಗಿ ವೈರಲ್ ಆಗಿದ್ದು, ಹಿಂದೂ ಸಮುದಾಯದವರ ಧಾರ್ಮಿಕ ಭಾವನೆಯನ್ನು ಕೆರಳಿಸಿದೆ…!!
ಕೂಡಲೇ ಈ ಮಾಂಸದಂಗಡಿ ಮುಂದೆ ಸೇರಿದ ಜನ ಮಾಲೀಕನನ್ನು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ…!
ಆದರೆ ಅಷ್ಟರಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ…!!
ಅನೇಕರು ಮಾಂಸದಂಗಡಿ ಮಾಲೀಕನ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ…!
ಅಲ್ಲದೇ ಅನೇಕರು ಮುಂಬೈ ಹಾಗೂ ನವೀ ಮುಂಬೈ ಪೊಲೀಸರಿಗೆ ಈ ವಿಚಾರವನ್ನು ಟ್ಯಾಗ್ ಮಾಡಿದ್ದಾರೆ…!!
ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ…!!
ಸಿಬಿಡಿ ಬೇಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!
ಜೊತೆಗೆ ಮಾಂಸದಂಗಡಿ ಮಾಲೀಕನನ್ನು ಕೂಡ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ…!!