
ಮಂಗಳೂರು: ನಾಪತ್ತೆಯಾಗಿರುವ ಹಿಂದು ಯುವತಿ ಕುಖ್ಯಾತ ರೌಡಿಶೀಟರ್ ಮುಸ್ಲಿಂ ಯುವಕನ ಜೊತೆ ಪತ್ತೆ.ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆದರೆ ಈಗ ನಾಪತ್ತೆಯಾಗಿರುವ ಹುಡುಗಿಯ ಮಾಹಿತಿ ಕಲೆ ಹಾಕಿದ ಪೊಲೀಸರು ಆತಂಕಕಾರಿ ವಿಷಯವೆಂದು ಹೊರಬಿದ್ದಿದೆ.!
ಯುವತಿ ನಾಪತ್ತೆ ಆಗಿರುವ ಬಗ್ಗೆ ದೂರು ದಾಖಲಾದ ತಕ್ಷಣ ಪಾಂಡೇಶ್ವರ ಠಾಣಾ ಪೊಲೀಸರು ಈ ಪ್ರಕರಣದ ತನಿಖೆಯನ್ನು ಶುರು ಮಾಡಿದರು ಪೊಲೀಸರು ಈಗ ಇವತಿಯನ್ನು ಪತ್ತೆ ಹಚ್ಚಿದ್ದಾರೆ ಆದರೆ ಯುವತಿ ನಟೋರಿಯಸ್ ರೌಡಿಶೀಟರ್ ಮುಸ್ಲಿಂ ಯುವಕ ಮಹಮ್ಮದ್ ಅಶ್ಪಕ್ ಜೊತೆ ಪತ್ತೆಯಾಗಿದ್ದಾಳೆ.!
ಈ ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು, ಈತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಪ್ರಕರಣಗಳು ಇವೆ ಹಾಗೂ ಸಾಕಷ್ಟು ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.!
ಮಂಗಳೂರಿನ ಕಾಲೇಜಿನ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆಂದು ಹುಡುಗಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ಗೆ ದೂರು ನೀಡಿದ್ದಾರೆ.!
ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನ ಪ್ರಜ್ಞಾ ಸಲಹಾ ಕೇಂದ್ರ ಮುಡಿಪು ಇಲ್ಲಿ ಇರಿಸಲಾಗಿದೆ.!
ಇನ್ನು ಇದೊಂದು ಲವ್ ಜಿಹಾದ್ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂಪರ ಸಂಘಟನೆಗಳು ಆರೋಪಿಸುತ್ತಿದೆ.
ಲವ್ ಜಿಹಾದ್ ಕರಾವಳಿಯಲ್ಲಿ ಹೆಚ್ಚುತ್ತಿದೆ. ಇದರ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರ ‘ಲವ್ ಜಿಹಾದ್’ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರಬೇಕಾಗಿದೆ ಎಂದು ವಿಶ್ವಹಿಂದೂ ಪರಿಷದ್ ಶರಣ್ ಪಂಪ್ವೆಲ್ ಹೇಳಿದ್ದಾರೆ.!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ ಯುವತಿ ತಂದೆ ಮತಾಂತರ ಮಾಡಲಾಗಿದೆ ಎಂದು ದೂರು ನೀಡಿದ್ದು, ಆದರೆ ಪೊಲಿಸರು ಈ ಪ್ರಕರಣದಲ್ಲಿ ಏನೆಲ್ಲಾ ಕ್ರಮಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.?
ಇನ್ನು ಹಿಂದೂ ಯುವತಿ ಸ್ವಇಚ್ಛೆಯಿಂದ ಮಹಮ್ಮದ್ ಅಶ್ಪಕ್ ಜೊತೆ ಹೋಗಿದ್ದಾಳಾ? ಅಥವಾ ಅಶ್ಪಕನೇ ಯುವತಿಯನ್ನು ಮನವೊಲಿಸಿ ಕರೆದುಕೊಂಡು ಹೋಗಿದ್ದಾ?
ಪೊಲೀಸ್ ತನಿಖೆ ನಂತರ ಸಂಪೂರ್ಣ ಮಾಹಿತಿ ತಿಳಿದುಬರಬೇಕಿದೆ.