
ಬೆಂಗಳೂರು – ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿರುವ ಪಾದಯಾತ್ರೆ ಮುಗಿಯುವುದರ ಒಳಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಧುರೀಣ ಬಿ ಎಸ್ ಯಡಿಯೂರಪ್ಪ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ…!
ಮುಡಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಒತ್ತಾಯಿಸಿ ಜೆ ಕೆ ಗ್ರ್ಯಾಂಡ್ ಅರೇನ ಸೆಂಟರ್ನಲ್ಲಿ ನಡೆದ ಬ್ರಹತ್ ಸಮಾವೇಶದಲ್ಲಿ ಯಡಿಯೂರಪ್ಪ ಮಾತನಾಡಿದರು…!!
ಈ ಅವ್ಯವಹಾರದಲ್ಲಿ ಸಿಎಂ ಸಿದ್ದರಾಮಯ್ಯನವರ ಕುಟುಂಬವೇ ಆರೋಪಿ ಸ್ಥಾನದಲ್ಲಿ ಇರುವುದರಿಂದ ಕಾನೂನಿನ ಶಿಕ್ಷೆಯಿಂದ ಸಿದ್ಧರಾಮಯ್ಯನವರು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದರು…!
ನನಗೆ ಇರುವ ಮಾಹಿತಿಯೊಂದರ ಪ್ರಕಾರ ನಮ್ಮ ಈ ಜಂಟಿ ಪಾದಯಾತ್ರೆ ಮುಗಿಯುವುದರ ಒಳಗಾಗಿ ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯನವರು ರಾಜಿನಾಮೆ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಿದರು…!!
ಬಹುತೇಕವಾಗಿ ಅವರು ಮಾನಸಿಕವಾಗಿಯೂ ಸಹ ಸಿಎಂ ಸ್ಥಾನದಿಂದ ಕೆಳಗಿಯಲು ಸಿದ್ಧರಾಗಿದ್ದಾರೆ ಎಂದರು…!
ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬದವರೇ ಶಾಮೀಲಾಗಿರುವುದರಿಂದ ರಾಜಿನಾಮೆ ನೀಡದೆ ಸಿದ್ಧರಾಮಯ್ಯ ಅವರಿಗೆ ಬೇರೆ ದಾರಿ ಇಲ್ಲ ಎಂದು ಹೇಳಿದರು…!!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರದ ವಿರುದ್ಧವಾಗಿ ಈ ಐತಿಹಾಸಿಕ ಪಾದಯಾತ್ರೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಮಿಕೊಂಡಿದ್ದೇವೆ ಎಂದ ಯಡಿಯೂರಪ್ಪ, ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತೇವೆ, ಪ್ರತಿಯೊಂದು ಕಡೆ 8 ರಿಂದ 10 ಸಾವಿರ ಜನ ಸೇರಬಹುದೆಂಬ ವಿಶ್ವಾಸ ನನಗಿದೆ ಎಂದು ಹೇಳಿದರು…!
ಸಿಎಂ ಸಿದ್ದರಾಮಯ್ಯ ಅವರಿಗೆ ಇದು ಕೊನೆಯ ಅವಕಾಶ, ಅವರು ನೈತಿಕ ಹೊಣೆಯನ್ನು ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಬಿಎಸ್ವೈ ಒತ್ತಾಯಿಸಿದರು…!!
ರಾಜೀನಾಮೆ ಅವರಾಗಿಯೇ ನೀಡಿದರೆ ಅವರಿಗೆ ಅದು ಶೋಭೆ ತರುತ್ತದೆ, ಪಕ್ಷಕ್ಕೂ ಗೌರವ ಸಿಗುತ್ತದೆ, ಇಲ್ಲದಿದ್ದರೆ ಅನಿವಾರ್ಯವಾಗಿ ರಾಜ್ಯಪಾಲರೇ ಕ್ರಮ ತೆಗೆದುಕೊಳ್ಳಬಹುದು, ಇದಕ್ಕೆ ಸಿದ್ಧರಾಮಯ್ಯನವರು ಅವಕಾಶ ನೀಡದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ನಾನು ಸಲಹೆ ನೀಡುತ್ತೇನೆ ಎಂದು ಹೇಳಿದರು…!
ರಾಜ್ಯದ ಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ವಾಸ್ತವ ಸ್ಥಿತಿ ಅರಿವಾಗಿದೆ, ಹೀಗಾಗಿ ಅವರು ಯಾವುದೇ ಆರೋಪಗಳಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು…!!
ರಾಜ್ಯಪಾಲರ ಕಚೇರಿ ದುರ್ಬಳಕೆಯಾಗುತ್ತಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪದ ಕುರಿತು ಮಾತನಾಡಿದ ಯಡಿಯೂರಪ್ಪ, ಈ ರೀತಿ ಆರೋಪ ಮಾಡುವುದರಿಂದ ತಮ್ಮ ಮೇಲಿನ ಆರೋಪಗಳಿಂದ ಅವರು ಮುಕ್ತರಾಗಲು ಸಾಧ್ಯವಿಇಲ್ಲ ಎಂದು ನುಡಿದರು…!
ಮುಂದುವರಿದು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆ ನಡೆಸುತ್ತಿದ್ದು, ಸಣ್ಣಪುಟ್ಟ ಗೊಂದಲಗಳಿದ್ದರೂ, ಎಲ್ಲರೂ ಹೊಂದಿಕೊಂಡು ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿ ಹೋರಾಟ ಮಾಡುತ್ತೇವೆ, ನಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು…!!