
ಹುಬ್ಬಳ್ಳಿ, : ಲವ್ ಜಿಹಾದ್ ಬಗ್ಗೆ ಹಿಂದೂ ಯುವತಿಯರಿಗೆ ಜಾಗೃತಿ ಮೂಡಿಸಲು ಅಭಿಯಾನ ಆರಂಭಿಸಿದ ಶ್ರೀರಾಮಸೇನೆ ಗೆ ಬಾಂಬ್ ಹಾಕುವ ಹಾಗೂ ಜೀವ ಬೆದರಿಕೆಗಳು ಕೇಳಿಬರುತ್ತಿವೆ. ಶ್ರೀರಾಮಸೇನೆ ಹೆಲ್ಪ್ ಲೈನ್ಗೆ 170ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ.
ಲವ್ ಜಿಹಾದ್ ವಿರುದ್ದ ಸಮರ ಸಾರಿರುವ ಶ್ರೀರಾಮಸೇನೆ ಮೇ 29 ರಂದು ಹೆಲ್ಫ್ ಲೈನ್ ಆರಂಭಿಸಿತ್ತು. ಈ ಹೆಲ್ಫ್ ಲೈನ್ಗೆ ಇದುವರೆಗೆ ಸಾವಿರಕ್ಕೂ ಅಧಿಕ ಕರೆಗಳು ಗಳು ಬಂದಿವೆ. ಇವುಗಳ ಪೈಕಿ 170ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಕಿಡಿಗೇಡಿಗಳು ಇಂಟರ್ನೆಟ್ ಕಾಲ್ ಮೂಲಕ ಜೀವ ಬೆದರಿಕೆ ಹಾಕುತ್ತಿದ್ದಾರೆ.
ಹಾಗೆ ಶ್ರೀರಾಮ ಸೇನೆಯ ಪ್ರಮುಖ ಮುಖಂಡರ ಫೇಸ್ಬುಕ್ ಖಾತೆಗಳು ಬಂದ್ ಆಗಿದೆ, ಈ ಕೆಲಸ ಸರಕಾರ ಮಾಡಿದೆಯೋ ಇಲ್ಲ ಯಾರು ಮಾಡಿದ್ದಾರೋ ಗೊತ್ತಿಲ್ಲ , ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುತ್ತಿರುವುದರಿಂದ ನಮ್ಮ ವಿರುದ್ಧ ಈ ರೀತಿಯ ಷಡ್ಯಂತ್ರಗಳನ್ನ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಎಮರ್ಜೆನ್ಸ್ ವಾತಾವರಣ ನಿರ್ಮಾಣವಾಗಿದೆ ಎಂದು ಗಂಗಾಧರ ಕುಲಕರ್ಣಿ ತಿಳಿಸಿದರು.
ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗ್ತಿದೆ. ರಾಜ್ಯ ಸರ್ಕಾರ ಮಾಡಿದ್ದಲ್ಲಿ ಕಾರಣ ಹೇಳಬೇಕು. ಮಾಡದೇ ಇದ್ದಲ್ಲಿ ಫೇಸ್ ಬುಕ್ ವಿರುದ್ಧ ಕೇಸ್ ಮಾಡಬೇಕು. ಸಂವಿಧಾನ ಬದ್ಧವಾದ ಹಕ್ಕುಗಳನ್ನು ವಾಪಸ್ ಕೊಡಿಸಬೇಕು. ಇದಕ್ಕೆಲ್ಲ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಕಾರಣ. ಎಲ್ಲಾ ಫೇಸ್ಬುಕ್ ಖಾತೆಗಳನ್ನು ಮರು ಆರಂಭಿಸಬೇಕು. ಇಲ್ಲದೇ ಇದ್ದಲ್ಲಿ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಗಂಗಾಧರ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.